ಕರ್ನಾಟಕ ಇಬ್ಬಾಗ ಹೇಳಿಕೆ ಖಂಡಿನೀಯ
Nov 02 2025, 04:15 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕನ್ನಡ ಭಾಷೆ ಅನ್ನೋದು ಕೇವಲ ಸಂವಹನ ಮಾಧ್ಯಮವಲ್ಲ. ಬದಲಾಗಿ ಸಂಸ್ಕೃತಿ, ಪರಂಪರೆ, ಈ ನೆಲದ ಪ್ರತೀಕವಾಗಿದೆ. ನೆಲ ಜಲದ ರಕ್ಷಣೆ ಜೊತೆಗೆ ಭಾಷೆ ಉಳಿದರೆ ಮಾತ್ರ ಸಂಸ್ಕೃತಿ ಉಳಿಯುತ್ತದೆ. ಕೇವಲ ಒಂದು ದಿನದ ರಾಜ್ಯೋತ್ಸವ ಆಚರಣೆಗೆ ಮಾತ್ರ ಸೀಮಿತವಾಗಿರದೆ ನಿರಂತರ ಕನ್ನಡ ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.