• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ದೂರಿನಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Mar 23 2025, 01:35 AM IST
ಬೆಂಗಳೂರು- ಮೈಸೂರು ನಡುವೆ ಹಾಗೂ ಗ್ರಾಮೀಣ ಭಾಗದಲ್ಲಿ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಸಂಚಾರ ನಡೆಸಿದ ವಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಕನ್ನಡ ಪರ ಸಂಘಟನೆಗಳ ಮುಖಂಡರು ಮದ್ದೂರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕರ್ನಾಟಕದ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಮರಾಠಿಗರ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸಿದರು.

ಕರ್ನಾಟಕ ಬಂದ್‌: ಧರಣಿಗಷ್ಟೇ ಸೀಮಿತವಾದ ಹೋರಾಟ

Mar 23 2025, 01:35 AM IST
ಬೆಳಗಾವಿಯಲ್ಲಿ ಎಂಇಎಸ್‌ ಮತ್ತು ಮರಾಠಿ ಪುಂಡಾಟಿಕೆ, ರಾಜ್ಯದ ಜಲವಿವಾದಗಳು ಹಾಗೂ ಭಾಷಾ ಸಾಮರಸ್ಯ ಕದಡುವ ಪ್ರಯತ್ನಗಳ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ ಬೆಂಬಲಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಡಾ. ಅಂಬೇಡ್ಕರ್‌ ಪ್ರತಿಮೆ ಮುಂದೆ ಧರಣಿಗೆ ನಡೆಸಿದರು.

ತಮಿಳ್ನಾಡಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವರ್ಸಸ್‌ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Mar 23 2025, 01:34 AM IST
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಹಾಗೂ ಕರ್ನಾಟಕ ಕೇಡರ್‌ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಮತ್ತು ಇತರ ಪಕ್ಷದ ನಾಯಕರು ಕಪ್ಪು ಬಟ್ಟೆ ಧರಿಸಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ಬಂದ್‌ ಅರಸೀಕೆರೆಯಲ್ಲಿ ಸಂಪೂರ್ಣ ವಿಫಲ

Mar 23 2025, 01:32 AM IST
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಹುಟ್ಟೂರಾಗಿರುವುದರಿಂದ ಸಹಜವಾಗಿಯೇ ತಾಲೂಕಿನಲ್ಲಿ ಕರವೇ ಸಂಘಟನೆ ಪ್ರಬಲವಾಗಿದೆ. ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಂದ್‌ಗೆ ಬೆಂಬಲ ನೀಡದ ಕಾರಣ ಸಹಜ ದಿನಗಳಂತೆ ಅಂಗಡಿ ಮುಂಗಟ್ಟುಗಳು ನಗರದಲ್ಲಿ ತೆರೆದರೆ, ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆದವು. ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಬಂದ್ ಹೆಸರಿನಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಬಂದೋಕಮಬಸ್ತ್ ಮಾಡಿದ್ದು ಕಂಡು ಬಂತು.

ಅಖಂಡ ಕರ್ನಾಟಕ ಬಂದ್ ರಾಮನಗರ ಜಿಲ್ಲೇಲಿ ವಿಫಲ

Mar 23 2025, 01:31 AM IST
ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಜಿಲ್ಲೆಯಲ್ಲಿ ಸಂಪೂರ್ಣ ವಿಫಲಗೊಂಡಿತು.

ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ ನೀರಸ

Mar 23 2025, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಎಂಇಎಸ್ ಪುಂಡಾಟಿಕೆ ಖಂಡಿಸಿ ವಾಟಾಳ ನಾಗರಾಜ್‌ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಬೆಂಬಲಿಸಿ ವಿಜಯಪುರ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಬಂದ್- ಮೈಸೂರಿನಲ್ಲಿ ನೀರಸ ಪ್ರತಿಕ್ರಿಯೆ

Mar 23 2025, 01:30 AM IST
ಹೊಟೇಲ್, ಮಾರುಕಟ್ಟೆ, ಕೆಎಸ್‌ಆರ್‌ ಟಿಸಿ ಬಸ್ ಗಳು, ಆಟೋ, ಟ್ಯಾಕ್ಸಿ ಸೇರಿದಂತೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು

ಕರ್ನಾಟಕ ಬಂದ್‌ಗೆ ಪಾಂಡವಪುರ ಪಟ್ಟಣ, ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ

Mar 23 2025, 01:30 AM IST
ಮರಾಠಿಗರು ಕನ್ನಡಿಗೆ ಮೇಲಿನ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಕರೆನೀಡಿದ ಕರ್ನಾಟಕ ಬಂದ್‌ಗೆ ಪಾಂಡವಪುರ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ಗೆ ಸ್ಪಂದಿಸದ ಬೆಂಗಳೂರು : ನೀರಸ ಪ್ರತಿಕ್ರಿಯೆ ವ್ಯಕ್ತ

Mar 23 2025, 01:30 AM IST

ಮರಾಠಿಗರ ಕನ್ನಡ ವಿರೋಧಿ ನೀತಿ, ಎಂಇಎಸ್‌ ನಿಷೇಧ, ಮಹದಾಯಿ, ಮೇಕೆದಾಟು ಜಲಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ ಕರೆಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.  

ಕರ್ನಾಟಕ ಬಂದ್ ಬೆಂಬಲಿಸಿ ರಾಣಿಬೆನ್ನೂರಲ್ಲಿ ಪ್ರತಿಭಟನೆ

Mar 23 2025, 01:30 AM IST
ಮಹಾರಾಷ್ಟ್ರದ ಪುಂಡಾಟಿಕೆ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ವತಿಯಿಂದ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಶನಿವಾರ ರಾಣಿಬೆನ್ನೂರು ನಗರದಲ್ಲಿ ತಾಲೂಕು ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ರೈತಪರ, ಕನ್ನಡಪರ, ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 76
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved