ಎಂಎಸ್ಜಿಪಿ ಘಟಕದಿಂದ ಕೊಳವೆ ಬಾವಿಗಳು ಕಲುಷಿತ
Dec 16 2023, 02:00 AM ISTದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ-ತ್ಯಾಜ್ಯ ಸಂಗ್ರಹಣೆ ಮಾಡುವ ಎಂಎಸ್ಜಿಪಿ ಘಟಕವು ಸ್ಥಾಪನೆಯಾಗಿರುವುದರಿಂದ ತಾಲೂಕಿನ ಕುಡಿಯುವ ನೀರಿನ ಮೂಲವಾಗಿರುವ ಹಲವು ಕೊಳವೆ ಬಾವಿಗಳು ಕಲುಷಿತವಾಗಿವೆ ಎಂದು ಶಾಸಕ ಧೀರಜ್ ಮುನಿರಾಜ್ ಶುಕ್ರವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿದರು.