ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೆರೆ
Aug 10 2024, 01:40 AM ISTಕನ್ನಡಪ್ರಭ ವಾರ್ತೆ ಬೆಳಗಾವಿಕಳ್ಳತನ ಪ್ರಕರಣ ಸಂಬಂಧ ಮಾಳಮಾರುತಿ ಪೊಲೀಸರು ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದು, ಆತನಿಂದ ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಕಮಲಾಪುರ ಗ್ರಾಮದ ಹಾಲಿ ಸೊಲ್ಲಾಪುರದ ನಾಗರಾಜ ಸುಭಾಷ ಕಚೇರಿ (39) ಬಂಧಿತ ಆರೋಪಿ. ಮಹಾಂತೇಶ ನಗರ, ಆಂಜನೇಯ ನಗರ ಮತ್ತು ಶಿವಬಸವ ನಗರಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.