ಸೇನೆಯ ಬಗ್ಗೆ ಕಾಂಗ್ರೆಸ್ ಸಂಶಯ ಕಳವಳಕಾರಿ: ಎಂ.ಪಿ.ರೇಣುಕಾಚಾರ್ಯ
May 25 2025, 01:23 AM ISTಆಪರೇಷನ್ ಸಿಂದೂರ ಯಶಸ್ಸಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿರುವುದನ್ನು ಸಹಿಸದ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಸಿನ ಮಂತ್ರಿ ಮಂಡಲದವರು ನಮ್ಮ ಯೋಧರು, ಸೇನೆ, ಸಶಸ್ತ್ರದ ಬಗ್ಗೆಯೇ ಅನುಮಾನಪಡುತ್ತಿರುವುದು ಕಳವಳಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.