ಜೀವಿಸಲು ಗಾಳಿ ನೀರಿನಂತೆ ಕಾನೂನು ಪಾಲನೆಯೂ ಅವಶ್ಯಕ: ದ್ಯಾವಪ್ಪ ಎಸ್.ಬಿ.
Jan 18 2024, 02:04 AM ISTಮಹಾಲಿಂಗಪುರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಗಲಕೋಟೆ, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಬನಹಟ್ಟಿ ಹಾಗೂ ಸ್ಥಳೀಯ ಪೊಲೀಸ್ ಠಾಣೆ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್.ಸಿ.ಪಿ.ಕಲಾ, ವಿಜ್ಞಾನ ಹಾಗೂ ಡಿಡಿಎಸ್ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಬುಧವಾರ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಮಾನವ ಜೀವಿಸಲು ಗಾಳಿ, ಆಹಾರ ಮತ್ತು ನೀರಿನಂತೆ ಕಾನೂನು ಪಾಲನೆ ಕೂಡಾ ಅವಶ್ಯಕ ಎಂದು ಹೇಳಿದರು.