ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷ ಸೇರಿ ಸ್ಪರ್ಧೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಸಿ.ಪಿ.ಯೋಗೇಶ್ವರ್ ಬಗ್ಗೆ ಬಿಜೆಪಿ ನಾಯಕರ ಎದುರೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಾನು ಕೇಂದ್ರದ ಸಚಿವನಾಗಿದ್ದೇನೆ. ಇಡೀ ದೇಶದ ಸಮಸ್ಯೆ ಆಲಿಸಬೇಕು. ಹೀಗಾಗಿ ಕೆಡಿಪಿ ಸಭೆಗೆ ನಾನು ಬರಲಿಲ್ಲ. ಕೆಡಿಪಿ ಸಭೆಗೆ ಬರದಿದ್ದರೂ ಮಾಹಿತಿ ತರಿಸಿಕೊಂಡು ಲೋಪದೋಷಗಳನ್ನು ಸರಿಪಡಿಸಲಿದ್ದೇನೆ. ಚಲುವರಾಯಸ್ವಾಮಿ ಬಂದರೆ ಬರಲಿ ಅಥವಾ ಬಿಡಲಿ. ನಾನು ಮಾತ್ರ ನನ್ನ ಕೆಲಸ ಮಾಡ್ತಿನಿ ಅಷ್ಟೇ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಇತರರ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಯವರು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಶನಿವಾರ ರಾಜ್ಯಪಾಲರಿಗೆ ಪತ್ರ ಚಳವಳಿ ಹಮ್ಮಿಕೊಂಡಿದ್ದರು.
‘ಕುಮಾರಸ್ವಾಮಿ ಅವರೇ ನೀವು ಸಿದ್ದರಾಮಯ್ಯ ಅವರಿಗಿಂತ ಮೊದಲು ನನ್ನನ್ನು ಎದುರಿಸಿ’ ಎಂದು ವಸತಿ ಸಚಿವ ಜಮೀರ್ ಅಹಮದ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.