ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮಗೆ ನೊಣವಿನಕೆರೆ ಅಜ್ಜಯ್ಯ ಅವರ ಮೇಲೆ ಭಕ್ತಿ, ಗೌರವ ಇದ್ದರೆ ಯಾವುದೇ ಅಕ್ರಮ ಮಾಡಿಲ್ಲ ಎಂದು ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ
ಇಳಿ ವಯಸ್ಸಿನಲ್ಲಿ ಯಡಿಯೂರಪ್ಪ ಮೇಲೆ ಸುಳ್ಳು ಕೇಸು ಹಾಕಿ, ಅವರನ್ನು ಕೆಣಕಿ ನೋವು ಕೊಟ್ಟಿದ್ದೀರಿ. ನಮ್ಮ ಆಸ್ತಿ ಕೇಳಿ ನನ್ನನ್ನು ಕೆರಳಿಸಿದ್ದೀರಿ. ನಾನು ನನ್ನ ಕುಟುಂಬದ ಆಸ್ತಿ ಬಗ್ಗೆ ಯಾವ ತನಿಖೆಗೂ ಸಿದ್ಧನಿದ್ದೇನೆ - ಕುಮಾರಸ್ವಾಮಿ
ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ