ಜೆಡಿಎಸ್ ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಗೆ ಇಲ್ಲ. ಇವರಂತೆ ಒಳಗೊಂದು ಹೊರಗೊಂದು ಇಟ್ಟುಕೊಂಡು ಮಾತನಾಡುವುದಿಲ್ಲ - ಎಚ್.ಡಿ.ಕುಮಾರಸ್ವಾಮಿ ತಿರುಗೇಟು
ವೈದ್ಯಕೀಯ ಜ್ಞಾನವಿಲ್ಲದೆ ಇನ್ನೊಬ್ಬರ ಆರೋಗ್ಯದ ವಿಷಯದಲ್ಲಿ ಲಘುವಾಗಿ ಮಾತನಾಡುವುದು ಬೇಡ. ನಾವು ಆರೋಗ್ಯಕರವಾಗಿ ಚುನಾವಣೆ ನಡೆಸುತ್ತಿದ್ದೇವೆ. ಯಾರ ಬಗ್ಗೆಯೂ ಲಘುವಾಗಿ ಮಾತನಾಡುತ್ತಿಲ್ಲ. ವಿನಾಕಾರಣ ಜೆಡಿಎಸ್ನವರನ್ನು ಕೆರಳಿಸಬೇಡಿ.
ಮಂಡ್ಯದಲ್ಲಿ ಈ ಬಾರಿ ನಿಖಿಲ್ ಸ್ಪರ್ಧಿಸಬೇಕೆಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೇಳುತ್ತಿದ್ದರು. ಆದರೆ, ಎಚ್ ಡಿಕೆ ಅವರೇ ಮೈತ್ರಿ ಅಭ್ಯರ್ಥಿಯಾಗಲು ಒತ್ತಾಸೆ, ಹಾರೈಕೆ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಮಣಿದು ಕುಮಾರಣ್ಣ ನಿಮ್ಮ ಮುಂದೆ ನಿಂತಿದ್ದಾರೆ.