ನಾವು ಸೋತಿದೀವಿ ಸತ್ತಿಲ್ಲ: ನಿಖಿಲ್ ಕುಮಾರಸ್ವಾಮಿ
Dec 01 2024, 01:33 AM ISTಚನ್ನಪಟ್ಟಣ: ಚುನಾವಣೆಯಲ್ಲಿ ನಾನು ಮೂರು ಬಾರಿ ಸೋತಿರಬಹುದು, ಆದರೆ ಎದೆಗುಂದುವುದಿಲ್ಲ. ಚನ್ನಪಟ್ಟಣ ಉಪಚುನಾವಣೆಯಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಯಾವುದೇ ಮುಖಂಡರು, ಕಾರ್ಯಕರ್ತರು ಕಣ್ಣಲ್ಲಿ ನೀರು ಹಾಕಬೇಡಿ. ನಾವು ಸೋತಿರಬಹುದು ಅಷ್ಟೇ ಆದರೆ ಸತ್ತಿಲ್ಲ ಎಂದು. ನನಗಿನ್ನು ೩೫ ವರ್ಷ ವಯಸ್ಸು. ರಾಜ್ಯದ ಜನತೆಯ ಆಶೀರ್ವಾದ ನಮ್ಮ ಜತೆ ಇದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.