ಕೊಲೆ ಶಂಕೆ: ಉದ್ಯಮಿ ಶವ ಹೊರತೆಗೆದು ಪರೀಕ್ಷೆ

Oct 17 2024, 12:47 AM IST
ಬೆಳಗಾವಿಯ ರಿಯಲ್‌ ಎಸ್ಟೇಟ್‌ ಉದ್ಯಮಿ ಸಂತೋಷ ಪದ್ಮನ್ನವರ ಸಾವು ಅನುಮಾನಾಸ್ಪದವಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ ಎಂದು ಪುತ್ರಿ ಸಂಜನಾ ಪದ್ಮನ್ನವರ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದ ಶವವನ್ನು ಹೊರತೆಗೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೆ ವೇಳೆ ಸಂತೋಷ ಪತ್ನಿ ಮತ್ತು ಇತರೆ ನಾಲ್ವರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. 2024, ಅ.9 ರಂದು ಮೃತಪಟ್ಟಿದ್ದ ಉದ್ಯಮಿ ಸಂತೋಷ ಪದ್ಮನ್ನವರ ಅವರ ಅಂತ್ಯಕ್ರಿಯೆಯನ್ನು ಸದಾಶಿವನಗರದ ಸ್ಮಶಾನಭೂಮಿಯಲ್ಲಿ ನೆರವೇರಿಸಲಾಗಿತ್ತು. ತಂದೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪುತ್ರಿ ಸಂಜನಾ ಪದ್ಮನ್ನವರ ಇದು ಸಹಜ ಸಾವಲ್ಲ.. ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು.