ರಾಷ್ಟ್ರಮಟ್ಟದ ಪ್ರಶಸ್ತಿಗಳು ನೂರರ ಗಡಿ ದಾಟಲಿ

Sep 17 2024, 12:53 AM IST
ರಾಷ್ಟ್ರ ಪ್ರಶಸ್ತಿ ಪಡೆಯುವುದು ಅಷ್ಟು ಸುಲಭದ ಮಾತಲ್ಲ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವತಃ ರಾಷ್ಟ್ರಪತಿಗಳಿಂದಲೇ ಪ್ರಶಸ್ತಿ ಪಡೆದಿರುವುದು ಜನಮೆಚ್ಚುಗೆ ಕೆಲಸ. ಇದು ಕೇವಲ ಕಬ್ಬಳಿ ಗ್ರಾಮಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಹೆಮ್ಮೆ ತರುವ ಕೆಲಸವಾಗಿದೆ. ಬಡತನದ ಕುಟುಂಬದಲ್ಲಿ ಹುಟ್ಟಿ ಬಾಲ್ಯ ಜೀವನದಿಂದಲೇ ಕಷ್ಟದ ಬದುಕನ್ನು ಸಾಗಿಸಿ ತಮ್ಮ ಕರ್ತವ್ಯ ನಿಷ್ಠೆಯಿಂದಲೇ ಇಂದು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಪಾತ್ರರಾಗಿರುವ ಕೆ.ಜೆ.ಶಿವಲಿಂಗಯ್ಯ ಅವರಿಗೆ, ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಗೌರವ ಸಮರ್ಪಣೆಗೆ ತಾನು ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.