ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.
ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲೀಕರು ಮತ್ತು ಎನ್ಎಚ್ಎಐ ಅನುಮತಿಸಿದ ಡಿಬಿಎಲ್ ಕಂಪನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತಿಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಎಂಎಂಡಿಎಲ್ ಕಾಯ್ದೆ-1957 ರಡಿ ಎಫ್ಐಆರ್ ದಾಖಲಿಸಲಾಗಿದೆ.
ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ.