ವಕ್ಫ್ ಮಂಡಳಿಯ ಹೆಸರಿನಲ್ಲಿ ರಾಜ್ಯಾದ್ಯಂತ ರೈತರು ಜಮೀನು, ಮಠಮಾನ್ಯಗಳ ಆಸ್ತಿ, ಸರ್ಕಾರಿ ಜಾಗವನ್ನು ವಕ್ಫ್ ಆಸ್ತಿ ಎಂದು ನಮೂದು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಶಾಲೆ ಮಠಮಾನ್ಯ, ಸ್ಮಶಾನಗಳು ರೈತರ ಪಿತೃರ್ಜಿತವಾಗಿ ಬಂದಿರುವಂತ ಜಮೀನುಗಳನ್ನೂ ಬಿಡದಂತೆ ವಕ್ಫ್ ಸಮಿತಿ ಹೆಸರಿಗೆ ದಾಖಲಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ ಮುನಿಸ್ವಾಮಿ