ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಾಳಯದಲ್ಲಿ ಸಂಭ್ರಮ
Jun 05 2024, 12:30 AM ISTಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಪಾಳಯದಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ನೆಚ್ಚಿನ ನಾಯಕನ ಪರ ಜೈಕಾರ ಕೂಗಿದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ ಜೊತೆಗೆ ಕುಮಾರಸ್ವಾಮಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.