ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ವಿಶ್ವಾಸದಿಂದ ನುಡಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆಯಾದ ಬಳಿಕ ಎರಡನೇ ಬಾರಿಗೆ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ಅವರಿಗೆ ಸೋಲು ಉಂಟಾಗಿತ್ತು.
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಕ್ಕೆಐವರು ಅಭ್ಯರ್ಥಿಗಳು ಕಣದಲ್ಲಿರುವ ಹಿನ್ನೆಲೆಯಲ್ಲಿ ಕುತೂಹಲ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ಕಾರಣ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿವೆ.