ಬ್ರಿಟಿಷ್ ರಾಕ್ ಬ್ಯಾಂಡ್ ಕೋಲ್ಡ್ ಪ್ಲೇ ಆಯೋಜಿಸಿರುವ ಸಂಗೀತ ಕಾರ್ಯಕ್ರಮ ಹಾಗೂ ಗಾಯಕ ದಲ್ಜೀತ್ ದೊಸಾಂಜ್ ಅವರ ದಿಲ್ಲುಮಿನಾಟಿ ಕಾರ್ಯಕ್ರಮಗಳ ಅಕ್ರಮ ಟಿಕೆಟ್ ಮಾರಾಟದ ಸಂಬಂಧ ದೆಹಲಿ, ಮುಂಬೈ, ಜೈಪುರ, ಚಂಡೀಗಢ ಹಾಗೂ ಬೆಂಗಳೂರಿನ ಕೆಲ ಪ್ರದೇಶಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ.
ಕಾಂಗ್ರೆಸ್ ಹೈಕಮಾಂಡ್, ಶಿಗ್ಗಾಂವಿ ಕ್ಷೇತ್ರಕ್ಕೆ ಸತತವಾಗಿ ಆರನೇ ಬಾರಿಗೆ ಮುಸ್ಲಿಂ ಸಮುದಾಯವನ್ನು ಆಯ್ಕೆ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಲುಂಡಿದ್ದ ಯಾಸೀರ್ ಅಹಮದ್ ಪಠಾಣ್ ಅವರಿಗೆ ಟಿಕೆಟ್ ದಯಪಾಲಿಸಿದೆ.
ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ