ವಿಮೆಗಾಗಿ ಬೇರೊಬ್ಬನನ್ನು ಕೊಲ್ಲಿಸಿದ ದಂಪತಿ
Aug 25 2024, 01:50 AM IST ವಿಮೆ ಹಣಕ್ಕಾಗಿ ಒಬ್ಬ ವ್ಯಕ್ತಿಯ ಬದಲಾಗಿ ಬೇರೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಅದನ್ನು ಅಪಘಾತ ಎಂದು ಬಿಂಬಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗಂಡಸಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಡಬಲ್ ಆಕ್ಸಿಡೆಂಟ್ ಬೆನಿಫಿಟ್ ಮಾಡಿಸಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಕೋಟಿಗಟ್ಟಲೆ ಹಣ ಬರುತ್ತದೆ ಎಂದು ತಿಳಿದು, ಯಾರೋ ಅಪರಿಚಿತ ವ್ಯಕ್ತಿಯನ್ನು ಕರೆತಂದು, ಆರೋಪಿಗಳು ಇತರರ ಸಹಾಯದಿಂದ ಅಪರಿಚಿತ ವ್ಯಕ್ತಿಯ ಮೇಲೆ ಲಾರಿಯನ್ನು ಹತ್ತಿಸಿ ಕೊಲೆ ಮಾಡಿ, ಅದನ್ನೇ ಮುನಿಸ್ವಾಮಿಗೌಡನ ಸಾವು ಎಂದು ಬಿಂಬಿಸಿ, ಇನ್ಸೂರೆನ್ಸ್ ಹಣವನ್ನು ಪಡೆಯಲು ಕೊಲೆ ಮಾಡಲಾಗಿರುವುದು ಬೆಳಕಿಗೆ ಬಂದಿದೆ.