ದಕ್ಷಿಣ ಪದವೀಧರ ಶಿಕ್ಷಕರ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ
Apr 10 2025, 01:01 AM ISTದಕ್ಷಿಣ ಪದವೀಧರ ಶಿಕ್ಷಕರ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಹೇಳಿದರು. ನಗರದ ವಿವೇಕಾನಂದ ಬಿ.ಇಡಿ ಕಾಲೇಜು, ಬಾಣಾವರ ಹಾಗೂ ಅರಸೀಕೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇತ್ತೀಚಿಗೆ ಭೇಟಿ, ನೀಡಿ ಪ್ರಾಧ್ಯಾಪಕರು ಹಾಗೂ ಆಡಳಿತ ಮಂಡಳಿ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಲಾ, ಕಾಲೇಜುಗಳ ಮೂಲ ಸೌಕರ್ಯ ಸೇರಿದಂತೆ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲು ಸರ್ಕಾರ ವಾರ್ಷಿಕ ಎರಡು ಕೋಟಿ ರು.ಅನುದಾನ ನೀಡುತ್ತಿದೆ ಎಂದರು.