ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ನಡೆಸಿದ ಜನತಾದರ್ಶನಕ್ಕೆ ಜಿಲ್ಲಾ ಅಧಿಕಾರಿಗಳು ತೆರಳದಂತೆ ರಾಜ್ಯ ನಿರ್ಬಂಧ ವಿಧಿಸಿತ್ತು. ಆದರೆ, ಚಲುವರಾಯಸ್ವಾಮಿ ಕೆರಗೋಡು ಗ್ರಾಮದಲ್ಲಿ ನಡೆಸಿದ ಜನತಾದರ್ಶನದಲ್ಲಿ 53 ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದುದು ವಿಶೇಷವಾಗಿತ್ತು.