• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಅಭ್ಯಂತರವಿಲ್ಲ

Aug 27 2025, 01:00 AM IST
ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಉದ್ಘಾಟನೆ ಮಾಡಿಸುವುದರಲ್ಲಿ ನಮ್ಮದೇನು ಅಭ್ಯಂತರವಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

ನಾಡಹಬ್ಬ ದಸರಾ ಮಹೋತ್ಸವ : ಎರಡನೇ ತಂಡದಲ್ಲಿ ಸುಗ್ರೀವನೇ ಬಲಶಾಲಿ

Aug 27 2025, 01:00 AM IST

ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು 2ನೇ ತಂಡದಲ್ಲಿ ನಾಡಿಗೆ ಆಗಮಿಸಿರುವ 5 ಆನೆಗಳ ತೂಕ ಪರೀಕ್ಷೆಯಲ್ಲಿ ಸುಗ್ರೀವ ಆನೆಯು ಬಲಶಾಲಿಯಾಗಿ ಹೊರ ಹೊಮ್ಮಿತು. ಕೇವಲ 5 ಕೆ.ಜಿ. ವ್ಯತ್ಯಾಸದಿಂದ ಅಜಾನುಬಾಹು ಶ್ರೀಕಂಠ ಆನೆಯು 2ನೇ ಸ್ಥಾನ ಪಡೆಯಿತು.

ಮೈಸೂರಿಗೆ ದಸರಾ ಗಜಪಡೆ 2ನೇ ತಂಡ

Aug 26 2025, 01:04 AM IST
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಗಜಪಡೆ 2ನೇ ತಂಡದಲ್ಲಿ 5 ಆನೆಗಳು ಕಾಡಿನಿಂದ ಆಗಮಿಸಿ ಮೈಸೂರು ಅರಮನೆ ಆವರಣದ ಆನೆ ಬಿಡಾರಕ್ಕೆ ಸೇರಿಕೊಂಡಿವೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಗೆ ವಿರೋಧ ಸರಿಯಲ್ಲ : ಎಚ್.ಡಿ. ರೇವಣ್ಣ

Aug 26 2025, 01:03 AM IST

ಹಿಂದೂ, ಮುಸ್ಲಿಂ ಎಂದು ಬೇರ್ಪಡಿಸುವುದು ಸರಿಯಲ್ಲ. ನಾವೆಲ್ಲರೂ ಒಂದೇ. ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಿರುವುದನ್ನು ಯಾರೂ ವಿರೋಧಿಸಬಾರದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಬಲ ಸೂಚಿಸಿದರು. 

ದಸರಾ- ಐದಾನೆಗಳು ಅರಮನೆಗೆ ಪ್ರವೇಶ

Aug 26 2025, 01:02 AM IST
ದುಬಾರೆ ಆನೆ ಶಿಬಿರದಿಂದ 42 ವರ್ಷದ ಗೋಪಿ, 43 ವರ್ಷದ ಸುಗ್ರೀವ, 11 ವರ್ಷದ ಹೇಮಾವತಿ, ಮತ್ತಿಗೋಡು ಆನೆ ಶಿಬಿರದಿಂದ 56 ವರ್ಷದ ಶ್ರೀಕಂಠ ಮತ್ತು ಭೀಮನಕಟ್ಟೆ ಆನೆ ಶಿಬಿರದಿಂದ 44 ವರ್ಷದ ರೂಪಾ ಆನೆ ಎರಡನೇ ತಂಡದಲ್ಲಿ ಆಗಮಿಸಿವೆ

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ

Aug 25 2025, 12:29 PM IST

ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ರಾಜಕೀಯ ಜಟಾಪಟಿ  

ಉಡುಪಿ ದಸರಾ ದಶಮ ಸಂಭ್ರಮ

Aug 25 2025, 01:00 AM IST
ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ದಶಮ ವರ್ಷದ ಉಡುಪಿ ದಸರಾದ ಪ್ರಯುಕ್ತ ‘ಮಾತೃಸಂಗಮ’ ಮತ್ತು ‘ನವರಾತ್ರಿ ದಾಂಡಿಯಾ’ ಕಾರ್ಯಕ್ರಮಗಳ ಬಗ್ಗೆ ಮಹಿಳಾ ಸದಸ್ಯರ ಪೂರ್ವಭಾವಿ ಸಭೆ ಶನಿವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಿತು.

ಕಾಟಾಚಾರಕ್ಕೆ ನಡೆದ ದಸರಾ ಕ್ರೀಡಾಕೂಟ

Aug 24 2025, 02:00 AM IST
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸದೆ ಇರುವ ಹಿನ್ನೆಲೆಯಲ್ಲಿ ಕ್ರೀಡಾ ಆಯೋಜಕರನ್ನು ಶಾಸಕ ಡಾ. ಚಂದ್ರು ಲಮಾಣಿ ತರಾಟೆಗೆ ತೆಗೆದುಕೊಂಡು ಘಟನೆ ಶನಿವಾರ ನಡೆಯಿತು.

ಬುಕರ್‌ ವಿಜೇತ ಬಾನುರಿಂದ ದಸರಾ ಉದ್ಘಾಟನೆ: ಸಿಎಂ

Aug 23 2025, 06:04 AM IST

ಪ್ರತಿಷ್ಠಿತ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನೆ ತಿಮ್ಮಕ್ಕಗೆ ನೀಡಲಿ

Aug 21 2025, 01:00 AM IST
ಬೇಲೂರು ತಾಲೂಕು ಕಚೇರಿ ಮುಂಭಾಗದಲ್ಲಿ ನಾಡೋಜ ಸಾಲುಮರದ ತಿಮ್ಮಕ್ಕರವರು ನೆಟ್ಟು ಬೆಳೆಸಿದ್ದ ಮರಗಳನ್ನು ತೆರವು ಮಾಡಿರುವ ತಹಸೀಲ್ದಾರ್‌ರನ್ನು ಅಮಾನತು ಮಾಡಬೇಕು ಹಾಗೂ ಈ ವರ್ಷದ ಮೈಸೂರು ದಸರಾ ಉದ್ಘಾಟನೆಯನ್ನು ನಾಡೋಜ ಸಾಲುಮರದ ತಿಮ್ಮಕ್ಕರವರ ಅಮೃತ ಹಸ್ತದಿಂದ ನೆರವೇರಿಸಲು ಸರಕಾರ ಮುಂದಾಗಬೇಕು ಎಂದು ಮಲೆನಾಡು ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಬಿ.ಎಸ್. ದರ್ಶನ್ ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved