ಲೋಕಸಭಾ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜನತಾದಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಂಬರೀಶ್ ಸೋಲಿಲ್ಲದ ಸರದಾರನೆಂಬಂತೆ ಇದ್ದ ಕಾಂಗ್ರೆಸ್ ಪಕ್ಷದ ಜಿ.ಮಾದೇಗೌಡರನ್ನು 1,80,523 ಮತಗಳ ಅಂತರದಿಂದ ಸೋಲಿಸಿ ಪ್ರಚಂಡ ಜಯಭೇರಿಯೊಂದಿಗೆ ಹೊಸ ದಾಖಲೆಯನ್ನೇ ಸೃಷ್ಟಿಸಿದ್ದರು.