ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದೇ ನಮ್ಮ ಗುರಿ: ಸಚಿವ ದಿನೇಶ್ ಗುಂಡೂರಾವ್

Mar 13 2024, 02:05 AM IST
ಕಿವಿ ಕೇಳಿಸದೆ ಇರುವ ಕಿವುಡುತನ ಹುಟ್ಟುವಾಗಲೇ ಕೆಲವರಿಗೆ ಬರುತ್ತದೆ. ಇಂತಹ ಮಕ್ಕಳಿಗೆ ಶ್ರವಣ ಸಾಧನಗಳನ್ನು ಅಳವಡಿಸುವ ಮೂಲಕ ಅಲ್ಪ ಸ್ವಲ್ಪ ಕೇಳಿಸುವಂತೆ ಮಾಡಬಹುದಾಗಿದೆ. ಕಿವುಡುತನಕ್ಕೆ ಚಿಕಿತ್ಸೆ ಪಡೆಯಲು ಲಕ್ಷಾಂತರ ರುಪಾಯಿ ಬರಿಸಬೇಕಾಗಿತ್ತು. ಇದು ಬಡವರಿಗೆ ಅಸಾಧ್ಯ. ಹೀಗಾಗಿ, ಸರ್ಕಾರದ ವತಿಯಿಂದ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.ನಾವು ಒಂದು ವರ್ಷದಲ್ಲಿ ಶ್ರವಣ ದೋಷಕ್ಕೆ 353 ಶಸ್ತ್ರಚಿಕಿತ್ಸೆ ಮಾಡಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಇದ್ದೇವೆ. ರಾಜ್ಯದಲ್ಲಿ 27 ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ವಾಕ್ ಮತ್ತು ಶ್ರವಣ ಸಂಸ್ಥೆ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಶ್ಲಾಘಿಸಿದರು.