ಕಪಿಲಾ ನದಿ ಸ್ನಾನಘಟ್ಟದ ಸ್ನಾನಗೃಹ, ಶೌಚಾಲಯದಲ್ಲಿ ಸುಲಿಗೆ

Jan 29 2024, 01:34 AM IST
ಶೌಚಾಲಯದಲ್ಲಿ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರ ಗಮನಕ್ಕೂ ತರಲಾಗಿ. ಶಾಸಕ ದರ್ಶನ್ ಧ್ರುವನಾರಾಯಣ್ ದೇವಾಲಯದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಈ ಕೂಡಲೇ ದರಪಟ್ಟಿ ಸೂಚನಾ ಫಲಕಗಳನ್ನು ಅಳವಡಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಹಾಗೂ ಸಿಬ್ಬಂದಿ ಭಕ್ತಾದಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದ್ದರೂ ಅಧಿಕಾರಿಗಳು ಶಾಸಕರ ಮಾತಿಗೂ ಕ್ಯಾರೇ ಎನ್ನದೆ ಟೆಂಡರ್‌ ದಾರನ ಜೊತೆಗೆ ಶಾಮೀಲಾಗಿರುವುದರಿಂದ ಯಾವುದೇ ಕ್ರಮ ತೆಗೆದುಕೊಳ್ಳದೆ ಇರುವುದರಿಂದ ದಿನನಿತ್ಯ ಭಕ್ತಾದಿಗಳ ಗೋಳು ಕೇಳುವರೇ ಇಲ್ಲದಂತಾಗಿದೆ.