ಬಿಡದಿ ಇನ್ಸ್ ಪೆಕ್ಟರ್ ಜಿ.ಕೆ.ಶಂಕರ್ ನಾಯಕ್ ಅಮಾನತು

Dec 15 2023, 01:30 AM IST
ಹಣ ದುರುಪಯೋಗ ಆರೋಪ ಎದುರಿಸುತ್ತಿರುವ ಬಿಡದಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಜಿ.ಕೆ. ಶಂಕರ್ ನಾಯಕ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.ಸೇವೆಯಲ್ಲಿ ಮುಂದುವರೆದಲ್ಲಿ ಪ್ರಕರಣದಲ್ಲಿನ ಸಾಕ್ಷಿಗಳಿಗೆ ಪ್ರಭಾವ ಬೀರುವುದು ಮತ್ತು ಸಾಕ್ಷಿ ನಾಶಪಡಿಸುವ ಸಂಭವ ಇರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲವೆಂದು ಪರಿಗಣಿಸಿ ಶಂಕರ್‌ ನಾಯಕ್‌ ಅವರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನ ಬ್ಯಾಟರಾಯನಪುರ ಪೋಲಿಸ್ ಠಾಣೆಯಲ್ಲಿ ಸೇವೆಯಲ್ಲಿದ್ದ ವೇಳೆ ಹಣ ದುರುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಶಂಕರ್‌ ನಾಯಕ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಸ್ತುತ ಅವರು ಬಿಡದಿ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

70 ವರ್ಷಗಳ ಹಿಂದೆ ಮಂಜೂರಾದ ಜಾಗ ಪುನಃ ಕಾಂಗ್ರೆಸ್ಸಿಗೆ: ಭೀಮಣ್ಣ ನಾಯ್ಕ

Dec 04 2023, 01:30 AM IST
ಸುಮಾರು 70 ವರ್ಷಗಳ ಹಿಂದೆ ಕಾಂಗ್ರೆಸ್ಸಿಗೆ ಮಂಜೂರಾಗಿದ್ದ ಸಿದ್ದಾಪುರ ಪಟ್ಟಣದ ಸಿ.ಆರ್. ಹಾಲ್ ಜಾಗವನ್ನು ಪುನಃ ಕಾಂಗ್ರೆಸ್ಸಿಗೆ ನೀಡುವಂತೆ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, 1952ರಲ್ಲಿ ಕಾಂಗ್ರೆಸ್ಸಿಗೆ ಮಂಜೂರಾಗಿದ್ದ ಪಟ್ಟಣದ ಹೃದಯ ಭಾಗದಲ್ಲಿರುವ 267ನೇ ಸರ್ವೆ ನಂಬರಿನ ಸಿ.ಆರ್. ಹಾಲ್ ಜಾಗವನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ರೆಕಾರ್ಡ್ ಬದಲಿಸಲಾಗಿತ್ತು. ಈ ಸಂಬಂಧ ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂರಕ ದಾಖಲೆ ನೀಡಿ ವಾದ ಮಂಡಿಸಲಾಗಿತ್ತು. ಇದೀಗ ಹೈಕೋರ್ಟ್ ಈ ಜಾಗವನ್ನು ಪುನಃ ಕಾಂಗ್ರೆಸ್‌ಗೆ ನೀಡುವಂತೆ ತೀರ್ಪು ನೀಡಿದೆ. ಒಂದು ಸಂಸ್ಥೆಯ ಹೆಸರಿನಲ್ಲಿರುವ ಜಾಗವನ್ನು ಅಧಿಕಾರ ದುರುಪಯೋಗಪಡಿಸಿಕೊಂಡು ರಿಕಾರ್ಡ್ ಬದಲು ಮಾಡುವುದು ಸರಿಯಲ್ಲ ಎಂದರು.