ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಹೇಳಿದ್ದೆ ಹೇಳೋ ಕಿಸಬಾಯಿ ದಾಸ ಎಂಬಂತೆ ಸಿದ್ದರಾಮಯ್ಯ ಹೇಳಿದ್ದನ್ನೇ ಹೇಳಿದ್ದಾರೆ. ನೀವು ಅಷ್ಟು ಶುದ್ಧಹಸ್ತರಾಗಿದ್ದರೆ ಸಿಬಿಐಗೆ ಯಾಕೆ ಹೆದರುತ್ತೀರಾ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದರು.
ಸರ್ಕಾರವೇ ಬೀದಿಗಿಳಿದು ನಾನು ಕಳ್ಳ ಅಲ್ಲ, ಕಳ್ಳ ಅಲ್ಲ ಎಂದು ಸಾರುತ್ತಿದೆ. ಹಾಗಾಗಿ ನಮ್ಮದು ಹೋರಾಟ, ಅವರದ್ದು ಬರೀ ಹಾರಾಟ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕುಹಕವಾಡಿದರು.