ಬಿಡದಿ ಇನ್ಸ್ ಪೆಕ್ಟರ್ ಜಿ.ಕೆ.ಶಂಕರ್ ನಾಯಕ್ ಅಮಾನತು

Dec 15 2023, 01:30 AM IST
ಹಣ ದುರುಪಯೋಗ ಆರೋಪ ಎದುರಿಸುತ್ತಿರುವ ಬಿಡದಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಜಿ.ಕೆ. ಶಂಕರ್ ನಾಯಕ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.ಸೇವೆಯಲ್ಲಿ ಮುಂದುವರೆದಲ್ಲಿ ಪ್ರಕರಣದಲ್ಲಿನ ಸಾಕ್ಷಿಗಳಿಗೆ ಪ್ರಭಾವ ಬೀರುವುದು ಮತ್ತು ಸಾಕ್ಷಿ ನಾಶಪಡಿಸುವ ಸಂಭವ ಇರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲವೆಂದು ಪರಿಗಣಿಸಿ ಶಂಕರ್‌ ನಾಯಕ್‌ ಅವರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನ ಬ್ಯಾಟರಾಯನಪುರ ಪೋಲಿಸ್ ಠಾಣೆಯಲ್ಲಿ ಸೇವೆಯಲ್ಲಿದ್ದ ವೇಳೆ ಹಣ ದುರುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಶಂಕರ್‌ ನಾಯಕ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಸ್ತುತ ಅವರು ಬಿಡದಿ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.