ಅರ್ಧಕ್ಕೆ ನಿಂತ ತಾಲೂಕಿನ ನೀರಾವರಿ ಕಾಮಗಾರಿಗಳು ಶೀಘ್ರ ಆರಂಭ

Jun 08 2024, 12:33 AM IST
ತಾಲೂಕಿನಲ್ಲಿ ಉತ್ತಮ ಮಳೆ ಶುಭಾರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಪ್ರವಾಹ ಪೀಡಿತ ಗ್ರಾಮಗಳ ರಕ್ಷಣೆಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜೊತೆಗೆ ನಾಲತವಾಡ ಪಟ್ಟದ ವ್ಯಾಪ್ತಿಯ ಗ್ರಾಮಗಳ ಮೂಲಕ ಹಾಯ್ದು ಹೋಗಿರುವ ಚಿಮ್ಮಲಗಿ ಏತ ನಿರಾವರಿ ಅರ್ಧಕ್ಕೆ ನಿಂತು ಹೋಗಿರುವ ನೀರಾವರಿ ಕಾಲುವೆ ಹಾಗೂ ಬ್ರಿಜ್ಡ್ ಕಾಮಗಾರಿ ಮುಂಬರುವ ದಿನಗಳಲ್ಲಿ ಕೈಗೆತ್ತಿಕೊಳ್ಳುವ ಮೂಲಕ ರೈತರ ಆಸೆ ಈಡೇರಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಕಾಂಗ್ರೆಸ್ ಸರಕಾರ ಸದಾ ಸಿದ್ಧವಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.