• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಪ್ರಿಲ್‌ 20ರ ವರೆಗೆ ಕಾಲುವೆಗೆ ನೀರು ಹರಿಸಿ

Mar 18 2025, 12:33 AM IST
ತುಂಗಭದ್ರಾ ನದಿಯಿಂದ ಕೆರೆ ತುಂಬುವ ಯೋಜನೆಯಡಿ ತಾಲೂಕಿನ ಹಲವು ಕೆರೆಗಳು ತುಂಬಿಲ್ಲ. ಅದಕ್ಕಾಗಿ ಕೃಷ್ಣ ಬಿ ಸ್ಕೀಂ ಯೋಜನೆ ವಿಸ್ತರಿಸಿ ಕನಕಗಿರಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು. ತುಂಗಭದ್ರಾ ನದಿಯಿಂದ ಎಡದಂಡೆ ಕಾಲುವೆಗೆ ಏ. ೨೦ರ ವರೆಗೆ ನೀರು ಹರಿಸಬೇಕು.

ಎಲ್‌ಎಲ್ ಕಾಲುವೆಗೆ ಏ. 30ರ ವರೆಗೆ ನೀರು ಹರಿಸಲು ರೈತರ ಆಗ್ರಹ

Mar 18 2025, 12:33 AM IST
ರೈತರ ಕೃಷಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಏ. 30ರ ತನಕ ಕಾಲುವೆಗೆ ನೀರು ಹರಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು.

ಶಿಂಷಾ ಎಡ ಮತ್ತು ಬಲದಂಡೆ ನಾಲೆ ಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ

Mar 18 2025, 12:33 AM IST
ತಾಲೂಕಿನ ಕೊಪ್ಪ ಹೋಬಳಿ ವ್ಯಾಪ್ತಿಯ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ಕೊಪ್ಪ ಗ್ರಾಮದಲ್ಲಿ ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದರು.

ಪಕ್ಷಿಗಳಿಗೆ ಗಿಡ ಮರದಲ್ಲಿಯೇ ನೀರು ಆಹಾರ ವ್ಯವಸ್ಥೆ

Mar 18 2025, 12:31 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತ ಆವರಣದಲ್ಲಿ ಗಿಡ ಮರಗಳಿಗೆ ನೇತು ಹಾಕಿರುವ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ನೀಡುವ ಬೌಲ್ ಗಲು.

ರಕ್ತ ಹರಿಸಿದರೂ ಸರಿಯೇ ನೊಣವಿನಕೆರೆ ಕೆರೆಯ ನೀರು ಕೊಡಲ್ಲ

Mar 18 2025, 12:31 AM IST
ನೊಣವಿನಕೆರೆ ಹೋಬಳಿಯ 50ಕ್ಕೂ ಹೆಚ್ಚು ಹಳ್ಳಿಗಳ ಸಾವಿರಾರು ರೈತರ ಬದುಕಿಗೆ ಆಸರೆಯಾಗಿರುವ ನೊಣವಿನಕೆರೆ ಕೆರೆಯ ನೀರನ್ನು ಕುಡಿಯುವ ನೀರಿಗಾಗಿ ತಿಪಟೂರು ನಗರಕ್ಕೆ ತೆಗೆದುಕೊಂಡು ಹೋಗಲು ಚಿಂತನೆ ನಡೆಸಲಾಗುತ್ತಿದೆ. ಆದರೆ ರಕ್ತ ಹರಿಸಿದರೂ ಸರಿಯೇ ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಬಿಡುವುದಿಲ್ಲ ಎಂದು ನೊಣವಿನಕೆರೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಎಸ್.ವಿ. ಸ್ವಾಮಿ ತಾಲೂಕು ಆಡಳಿತಕ್ಕೆ ಖಡಕ್ ಎಚ್ಚರಿಕೆ ನೀಡಿದರು.

ನಾಲಾ ತೊಟ್ಟಿಲಿಗೆ ಧಕ್ಕೆ: 300 ಕ್ಯು. ನೀರು ವ್ಯರ್ಥ

Mar 18 2025, 12:30 AM IST
ಭದ್ರಾ ಡ್ಯಾಂನ ಆನವೇರಿ ವಿಭಾಗದ ನಾಲಾ ತೊಟ್ಟಿಲು ದಿಗ್ಗೇನಹಳ್ಳಿ ಬಳಿ ಮೊನ್ನೆ ರಾತ್ರಿ ಒಡೆದಿದ್ದರಿಂದ ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಹರಿಹರ ತಾಲೂಕು ಮಲೇಬೆನ್ನೂರು ಭಾಗದ 25 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಿಲ್ಲದಂತಾಗಿದೆ.

ಬೇಸಿಗೆಯಲ್ಲಿ ನೀರು, ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು : ಕೇಂದ್ರ ಸಚಿವ ಎಚ್ಡಿಕೆ

Mar 17 2025, 12:35 AM IST
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು.

ಮಂಚನಬೆಲೆ ಎಡದಂಡೆ ನಾಲೆಯಲ್ಲಿ ಹರಿದ ನೀರು

Mar 17 2025, 12:34 AM IST
ರಾಮನಗರ: ಎರಡು ದಶಕಗಳ ತರುವಾಯ ಸಾವಿರಾರು ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಮಂಚನಬೆಲೆ ಜಲಾಶಯದ ಎಡ ದಂಡೆ ಕಾಲುವೆಗೆ ನೀರು ಹರಿಸುವ ಕಾರ್ಯಕ್ಕೆ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು.

ಕಲುಷಿತ ನೀರು ದೇವಿರಮ್ಮಣ್ಣಿ, ಹೊಸಹೊಳಲು ದೊಡ್ಡ ಕೆರೆಗಳಿಗೆ ಸೇರ್ಪಡೆ

Mar 17 2025, 12:31 AM IST
ಪಟ್ಟಣದ ಮಲಯುಕ್ತ ತ್ಯಾಜ್ಯ ನೀರಿನ ವಿಲೇವಾರಿಗಾಗಿ ಒಳಚರಂಡಿ ಮಂಡಳಿ ಪಟ್ಟಣದ ನಾಲ್ಕು ಕಡೆ ತೇವಬಾವಿಗಳನ್ನು ನಿರ್ಮಿಸಿದ್ದರೂ ಅವು ಕಾರ್ಯ ನಿರ್ವಹಿಸದಿರುವ ಪರಿಣಾಮ ಕಲುಷಿತ ನೀರು ಪಟ್ಟಣದ ಜನ ಬಳಕೆ ಮಾಡುವ ದೇವೀರಮ್ಮಣ್ಣಿ ಕೆರೆ ಮತ್ತು ಹೊಸಹೊಳಲು ಕೆರೆ ಸೇರಿ ಜಲ ಮಾಲಿನ್ಯ ಮತ್ತು ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜ್ಯ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ್ದರು.

79 ಕೆರೆಗಳಿಗೆ ನೀರು ತುಂಬಿಸಲು ಅನುದಾನ ನೀಡಿದ್ದೆ ಕಾಂಗ್ರೆಸ್

Mar 16 2025, 01:47 AM IST
ತರೀಕೆರೆ, ಭದ್ರಾ ಮೇಲ್ದಂಡೆ ಯೋಜನೆಯಿಂದ ತಾಲೂಕಿನ 79 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಅನುದಾನ ನೀಡಿದ್ದೆ ಕಾಂಗ್ರೆಸ್ ಸರ್ಕಾರ, ಈ ವಿಚಾರದಲ್ಲಿ ಬಿಜೆಪಿ ಆರೋಪ ಶುದ್ಧ ಸುಳ್ಳು, ಅದನ್ನು ನಾವು ಖಂಡಿಸುತ್ತೇವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಹೇಳಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 170
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved