ಶೀಘ್ರವೇ ಘಟಪ್ರಭಾ ನದಿಗೆ 3500 ಕ್ಯೂಸೆಕ್‌ ನೀರು: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.

Feb 16 2024, 01:46 AM IST
ಬಾಗಲಕೋಟೆ: ಜಿಲ್ಲೆಯ ಘಟಪ್ರಭಾ ನದಿಯ ಪಾತ್ರದಲ್ಲಿ ನೀರು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 3500 ಕ್ಯೂಸೆಕ್ ನೀರು ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಡಕಲ್ ಜಲಾಶಯದಿಂದ ಫೆ.19ರಂದು ನೀರು ಬಿಡುಗಡೆ ಮಾಡುವುದಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ. ನೀರು ಬಿಡುಗಡೆಯಾದಾಗ ಯಾವುದೇ ಕಾರಣಕ್ಕೂ ನದಿ ಪಾತ್ರದಲ್ಲಿ ಜಮೀನುಗಳಿಗೆ ನೀರು ಬಳಸಿಕೊಳ್ಳುವಂತಿಲ್ಲ ಎಂದು ತಿಳಿಸಿದ್ದಾರೆ.