• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಹ್ಯಾಕಾಶದಲ್ಲಿ ಬೆಂಗಳೂರಿನ ನೀರು ಕರಡಿ ಶುಭಾಂಶು ಪ್ರಯೋಗ ಯಶಸ್ವಿ

Jul 07 2025, 12:34 AM IST
ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ (ವಾಯೇಜರ್‌ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು.

ತುಂಗಭದ್ರಾ ಜಲಾಶಯದಿಂದ ನದಿಗೆ 58,869 ಕ್ಯುಸೆಕ್‌ ನೀರು

Jul 07 2025, 12:17 AM IST
ತುಂಗಭದ್ರಾ ಜಲಾಶಯದ ಒಳ ಹರಿವು 72,490 ಕ್ಯುಸೆಕ್‌ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ 58,869 ಕ್ಯುಸೆಕ್‌ ನೀರು ಹರಿಸಲಾಗಿದೆ.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಮತ್ತೆ ನೀರು ಸ್ಥಗಿತ

Jul 06 2025, 11:48 PM IST
ಜು. 1ರಿಂದ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯಲ್ಲಿ ನೀರು ಹರಿಸಬೇಕೆಂದು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ, ಜು. 4ಆದರೂ ಅಧಿಕಾರಿಗಳು ಕಾಲುವೆಗೆ ನೀರು ಹರಿಸಿರಲಿಲ್ಲ.

ಭದ್ರಾ ನೀರು ಹರಿಸದೇ ರೈತವಿರೋಧಿ ನಡೆ

Jul 06 2025, 01:49 AM IST
ಭದ್ರಾ ಡ್ಯಾಂ ಬಲದಂಡೆ ನಾಲೆಯಲ್ಲಿ ಕೈಗೊಂಡ ಕಾಮಗಾರಿ ಪರಿಸ್ಥಿತಿ ನೋಡಿದರೆ ಮಳೆಗಾಲದ ಹಂಗಾಮಿನಲ್ಲಿ ಭದ್ರಾ ಕಾಲುವೆಗೆ ನೀರು ಹರಿಸುವುದು ಮತ್ತಷ್ಟು ವಿಳಂಬವಾಗೋದು ಸ್ಪಷ್ಟವಾಗಿದೆ. ಇದು ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನಡೆ ಎಂದು ಜಿಲ್ಲಾ ರೈತರ ಒಕ್ಕೂಟ ಮುಖಂಡ ಬಿ.ಎಂ. ಸತೀಶ ಕೊಳೇನಹಳ್ಳಿ ದೂರಿದ್ದಾರೆ.

41 ಕೆರೆಗಳಿಗೆ ನೀರು ಹರಿಸಲು ಸರ್ಕಾರ ಅನುಮೋದನೆ

Jul 06 2025, 01:48 AM IST
ರಾಜ್ಯದಲ್ಲಿ 2013ರಿಂದ 18ರವರೆಗೆ ಅಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಷೇತ್ರದ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಸಾಸಿವೆಹಳ್ಳಿ ಏತನೀರಾವರಿ ಯೋಜನೆ ಜಾರಿಗೆ ತಂದರು. ಅನುದಾನ ಸಹ ಮಂಜೂರು ಮಾಡಿಸಿದ್ದರು. ಇದರ ಫಲವಾಗಿ ಈ ಯೋಜನೆ ಕಾಮಗಾರಿ ಮುಕ್ತಾಯಗೊಂಡು ಕೆರೆಗಳಿಗೆ ನೀರು ತುಂಬಿಸುವ ಟ್ರಯಲ್ ರನ್ ನಡೆಯುತ್ತಿದೆ ಎಂದು ತಾಲೂಕು ಪಕ್ಷದ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ತುಂಗಭದ್ರಾ ನದಿಗೆ ಹೆಚ್ಚಿನ ನೀರು: ಶ್ರೀಕೃಷ್ಣದೇವರಾಯ ಸಮಾಧಿ ಮುಳುಗುವ ಭೀತಿ

Jul 06 2025, 01:48 AM IST
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದರಿಂದ ನದಿಗೆ ಎರಡು ದಿನದಿಂದ 64000 ಕ್ಯುಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಾಲೂಕಿನ ಸಾಣಾಪುರ ಬಳಿ ಇರುವ ಹಳೇ ಸೇತುವೆ ಮೇಲೆ ನೀರು ಹರಿಯುತ್ತಿದೆ.

ಸೋಂಪುರ ಕೆರೆಗೆ ಕಲುಷಿತ ನೀರು ತಡೆ : ಅಧಿಕಾರಿಗಳಿಗೆ ಅಂತಿಮ ಗಡುವು ಅವಕಾಶ ನೀಡಿದ ಲೋಕಾಯುಕ್ತ

Jul 05 2025, 01:48 AM IST
ನಗರದ ಬನಶಂಕರಿ 6ನೇ ಹಂತದ ಸೋಂಪುರ ಕೆರೆಗೆ ಕಲುಷಿತ ನೀರು ಹರಿಯುವುದರ ತಡೆಗೆ ಇಂಟರ್‌ಮೀಡಿಯೇಟ್‌ ಸೀವೇಜ್‌ ಪಂಪಿಂಗ್‌ ಸ್ಟೇಷನ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಸಂಬಂಧಿತ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಅಂತಿಮ ಅವಕಾಶ ನೀಡಿದ್ದಾರೆ.

ತ್ಯಾಜ್ಯ ನೀರು ಕಾಲುವೆ ಮುಚ್ಚಲು 15 ದಿನ ಗಡುವು

Jul 05 2025, 12:18 AM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ರಾಸಾಯನಿಕ ತ್ಯಾಜ್ಯ ನೀರಿನ ಕಾಲುವೆಯನ್ನು 15 ದಿನಗಳೊಳಗೆ ಮುಚ್ಚದಿದ್ದರೆ ಎಲ್ಲಾ ಕಾಲುವೆಗಳನ್ನು ಸಂಪೂರ್ಣ ಮುಚ್ಚಲಾಗುವುದು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡ ವಸಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ರಸ್ತೆಯ ಮೇಲೆ ಹರಿಯುತ್ತಿದೆ ಯುಜಿಡಿ ನೀರು

Jul 04 2025, 11:53 PM IST
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವು 31 ವಾರ್ಡುಗಳನ್ನು ಹೊಂದಿದೆ. ಇಲ್ಲಿನ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಯನ್ನು ವೈಜ್ಞಾನಿಕವಾಗಿ ನಿಮಿರ್ಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಅರ್ಧಂರ್ಬಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಚರಂಡಿಗಳಿಗೆ ಪರಸ್ಪರ ಸಂಪರ್ಕ ಇಲ್ಲ. ಹೀಗಿರುವಾಗ ಕೊಳಚೆ ನೀರು ಹರಿದು ಹೋಗಲು ಸಾಧ್ಯವಾಗುತ್ತಿಲ್ಲ.

ರೈತರ ಆಕ್ರೋಶಕ್ಕೆ ಮಣಿದು ಕಾಲುವೆಗೆ ನೀರು ಹರಿಸಿದ ಅಧಿಕಾರಿಗಳು

Jul 04 2025, 11:50 PM IST
ಒಂದೆಡೆ ನದಿಗೆ ಅಪಾರ ಪ್ರಮಾಣದ ನೀರು ಹಾಗೂ ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ. ಕೊಪ್ಪಳ ಶಾಸಕ, ಸಂಸದರ ಊರು ಸೇರಿ 10 ಹಳ್ಳಿ ಹಾಗೂ 20,000 ಎಕರೆ ಪ್ರದೇಶಕ್ಕೆ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ ನೀರುಣಿಸುತ್ತದೆ. ಆದರೆ, ಅಧಿಕಾರಿಗಳ ತಪ್ಪಿನಿಂದ ಟ್ಯಾಂಕರ್‌ ನೀರು ತಂದು ಸಸಿ ನಾಟಿ ಮಾಡಬೇಕಾದ ಪರಿಸ್ಥಿತಿ ಇದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 180
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved