ಶ್ರೀಗಂಧ ಮರಗಳ್ಳರನ್ನು ಬಂಧಿಸಿದ ಅಬ್ಬಿನಹೊಳೆ ಪೊಲೀಸರು
Sep 11 2024, 01:12 AM ISTತಾಲೂಕಿನ ಅಬ್ಬಿನಹೊಳೆ ಠಾಣೆಯ ಪೊಲೀಸರು ಶ್ರೀಗಂಧ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಶ್ರೀರಂಗ ಬಡಾವಣೆ ಇ-ಕುರುಬರಹಳ್ಳಿ ಗ್ರಾಮದ ವಿ. ರಾಜು ತಂದೆ ಲೇಟ್ ವೆಂಕಟಪ್ಪ ರವರಿಗೆ ಸೇರಿದ ಇಕ್ಕನೂರು ಕುರುಬರಹಳ್ಳಿ ಮಧ್ಯೆಯಿರುವ ರಿನಂ. 13/3 ರ 4 ಎಕರೆ ಜಮೀನಿನಲ್ಲಿ 300 ಶ್ರೀಗಂಧದ ಸಸಿಗಳನ್ನು ಹಾಕಿದ್ದರು. ಅವುಗಳಲ್ಲಿ ಸೆ.3ರಂದು ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು 3 ಶ್ರೀಗಂಧದ ಮರಗಳನ್ನು ಕತ್ತರಿಸಿ ಮರದ ಮೇಲ್ಭಾಗ ಅಲ್ಲಿಯೇ ಬಿಟ್ಟು ಮರದ ಕಾಂಡದ ಭಾಗವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.