ಜನಪರ, ಅಭಿವೃದ್ಧಿಪರವಾದ ಕೇಂದ್ರದ ಮಧ್ಯಂತರ ಬಜೆಟ್‌: ಪ್ರೊ.ಅಶೋಕ ಜಿ. ಚಪ್ಪಳಗಾಂವ

Feb 09 2024, 01:45 AM IST
ಮುಧೋಳ: ಸ್ಥಳೀಯ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಐಕ್ಯೂಎಸಿ ಅಡಿಯಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಸ್ನಾತಕ ಅರ್ಥಶಾಸ್ತ್ರ ವಿಭಾಗದ ಸಹಯೋಗದಲ್ಲಿ ಗುರುವಾರ ಕಾಲೇಜಿನ ಸಭಾಭವನದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮೇಲಿನ ರಾಜ್ಯಮಟ್ಟದ ಚರ್ಚಾಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಿವೃತ್ತ ಪ್ರಾದ್ಯಾಪಕ ಪ್ರೊ.ಅಶೋಕ ಜಿ. ಚಪ್ಪಳಗಾಂವ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದಾರೆ ಎಂದರು.

ಕೇಂದ್ರ ಸರ್ಕಾರದಿಂದ ಕಾಟಾಚಾರ ಬಜೆಟ್‌: ಸುಂದರೇಶ್

Feb 05 2024, 01:49 AM IST
ಕೇಂದ್ರ ಸರ್ಕಾರದ ಬಜೆಟ್‌ ಕಾಟಾಚಾರ ಬಜೆಟ್‌ ಆಗಿದೆ. ಕೆಲವು ಉದ್ಯಮಿಗಳಿಗೆ ಗುತ್ತಿಗೆ ನೀಡಲು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದೆ. ಇದು ಅತ್ಯಂತ ಕಳಪೆ ಬಜೆಟ್. ಕಳೆದ ಬಜೆಟ್‌ನಲ್ಲಿ ಕೊರೋನಾದಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ₹20 ಸಾವಿರ ಕೋಟಿಯನ್ನು ಸಣ್ಣ ಕೈಗಾರಿಕೆಗಳಿಗೆ ಮೀಸಲು ಇಟ್ಟಿರುವುದಾಗಿ ಘೋಷಣೆ ಮಾಡಿದ್ದರು. ಆದರೆ, ಜಿಲ್ಲೆಯ ಯಾವ ಕೈಗಾರಿಕೆಗೂ ಇದರಿಂದ ಪ್ರಯೋಜನ ಆಗಲಿಲ್ಲ. 2022 ಗುಡಿಸಲು ಮುಕ್ತ ರಾಷ್ಟ್ರ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಈವರೆಗೂ ಜಿಲ್ಲೆಯಲ್ಲಿ ಒಂದು ಮನೆಯೂ ನಿರ್ಮಾಣ ಆಗಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್‌. ಸುಂದರೇಶ್ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.