ಸತೀಶ ಕುಲಕರ್ಣಿ ಬದುಕು, ಬರಹ ನವ ಪೀಳಿಗೆಗೆ ಪ್ರೇರಣಾದಾಯಕ
Nov 20 2023, 12:45 AM ISTಸಾಹಿತಿ ಸತೀಶ ಕುಲಕರ್ಣಿ ಅವರ ಬದುಕು, ಬರಹ ಮತ್ತು ಸಮಾಜದ ಬದಲಾವಣೆಗೆ ನಡೆದ ಹೋರಾಟಗಳು ನವ ಪೀಳಿಗೆಗೆ ಪ್ರೇರಣಾದಾಯಕ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು.ನಗರದ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಭಾವ ಸಂಗಮ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.