ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣ ಜಖಂಗೊಂಡು, ಬಸ್ ಉರುಳಿ ಬಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹೊಸಹಳ್ಳಿ ಗೇಟ್ನ ಶ್ರೀರಂಗಪಟ್ಟಣ- ಕೆಆರ್ಎಸ್ ಹೆದ್ದಾರಿಯಲ್ಲಿ ನಡೆದಿದೆ.
ಕೇರಳ ಕಣ್ಣೂರು ಕಾರು ಚಾಲಕ ಗಿರೀಶ್, ಬೈಜು, ಪತ್ನಿ ಬನ್ಸಿ, ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.