ಬಸ್ ನಿಲ್ದಾಣದ ವ್ಯವಸ್ಥೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ
Mar 07 2025, 12:52 AM ISTಸರ್ಕಾರದ ಗ್ಯಾರಂಟಿ ಯೋಜನೆಗಳ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪ ಅಮರ್ನಾಥ್ ಅವರು ಹಾಸನದ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಶಕ್ತಿ ಯೋಜನೆ ಕುರಿತು ಮಹಿಳೆಯರನ್ನು ಮಾತನಾಡಿಸಿ, ಬಸ್ ನಿಲ್ದಾಣದ ಹೋಟೆಲ್ ಹಾಗೂ ಫಾಸ್ಟ್ ಫುಡ್ ಮಳಿಗೆಗಳನ್ನು ವೀಕ್ಷಣೆ ಮಾಡಿದರು. ಆಹಾರ ಸೇವನೆಗೆ ಬಳಸುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಹೋಟೆಲ್ಗಳಲ್ಲಿ ಆರೋಗ್ಯಪೂರ್ಣವಾದ ಉತ್ತಮ ಗುಣಮಟ್ಟದ ತಿಂಡಿ ಮತ್ತು ಊಟ ಒದಗಿಸಬೇಕು ಎಂದು ಸೂಚಿಸಿದರು.