ಸಾರಿಗೆ ಬಸ್ ಗಳಿಗೆ ಆಟ,ಪ್ರಯಾಣಿಕರಿಗೆ ಪ್ರಾಣ ಸಂಕಟ..!

Nov 25 2023, 01:15 AM IST
ನಿಗದಿತ ಸ್ಥಳದಲ್ಲಿ ಸಾರಿಗೆ ಬಸ್ ನಿಲುಗಡೆಯಾಗದೆ ವಿದ್ಯಾರ್ಥಿಗಳು ಬಸ್ ಹತ್ತಲು ಪರದಾಟ ನಡೆಸುತ್ತಿದ್ದು, ಅವಘಡಗಳು ಸಂಭವಿಸಿದರೆ ಹೊಣೆಯಾರು? ಎಂಬ ಆತಂಕ ಎದುರಾಗಿದೆ.ಭಾರತೀನಗರದ ಮದ್ದೂರು - ಮಳವಳ್ಳಿ ಹೆದ್ದಾರಿಯಲ್ಲಿ ಸಾರಿಗೆ ಬಸ್‌ ನಿಲ್ದಾಣದಲ್ಲಿ ನಾಮಫಲಕ ಹಾಕಿದ್ದರೂ ಆ ಸ್ಥಳದಲ್ಲಿ ಬಸ್‌ಗಳನ್ನು ನಿಲ್ಲಿಸದೇ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ನಿಲ್ಲಿಸಲಾಗುತ್ತಿದೆ. ಇದು ಅಪಘಾತಗಳು ನಡೆಯಲು ಎಡೆ ಮಾಡಿಕೊಟ್ಟಿದೆ. ನಿತ್ಯ ಆಸ್ಪತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಓಡಾಡುವುದರಿಂದ ಸಾರಿಗೆ ಬಸ್‌ಗಳು ನಿಗಧಿತ ಸ್ಥಳದಲ್ಲಿ ನಿಲ್ಲುತ್ತಿಲ್ಲ. ಜೊತೆಗೆ ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳುತ್ತಿಲ್ಲ. ಅಡ್ಡಾದಿಡ್ಡಿ ಬಸ್‌ಗಳ ಸಂಚಾರವಾಗುತ್ತಿದೆ.

ಸಾರಿಗೆ ಬಸ್ ಗಳಿಗೆ ಆಟ,ಪ್ರಯಾಣಿಕರಿಗೆ ಪ್ರಾಣ ಸಂಕಟ..!

Nov 25 2023, 01:15 AM IST
ನಿಗದಿತ ಸ್ಥಳದಲ್ಲಿ ಸಾರಿಗೆ ಬಸ್ ನಿಲುಗಡೆಯಾಗದೆ ವಿದ್ಯಾರ್ಥಿಗಳು ಬಸ್ ಹತ್ತಲು ಪರದಾಟ ನಡೆಸುತ್ತಿದ್ದು, ಅವಘಡಗಳು ಸಂಭವಿಸಿದರೆ ಹೊಣೆಯಾರು? ಎಂಬ ಆತಂಕ ಎದುರಾಗಿದೆ.ಭಾರತೀನಗರದ ಮದ್ದೂರು - ಮಳವಳ್ಳಿ ಹೆದ್ದಾರಿಯಲ್ಲಿ ಸಾರಿಗೆ ಬಸ್‌ ನಿಲ್ದಾಣದಲ್ಲಿ ನಾಮಫಲಕ ಹಾಕಿದ್ದರೂ ಆ ಸ್ಥಳದಲ್ಲಿ ಬಸ್‌ಗಳನ್ನು ನಿಲ್ಲಿಸದೇ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ನಿಲ್ಲಿಸಲಾಗುತ್ತಿದೆ. ಇದು ಅಪಘಾತಗಳು ನಡೆಯಲು ಎಡೆ ಮಾಡಿಕೊಟ್ಟಿದೆ. ನಿತ್ಯ ಆಸ್ಪತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಓಡಾಡುವುದರಿಂದ ಸಾರಿಗೆ ಬಸ್‌ಗಳು ನಿಗಧಿತ ಸ್ಥಳದಲ್ಲಿ ನಿಲ್ಲುತ್ತಿಲ್ಲ. ಜೊತೆಗೆ ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳುತ್ತಿಲ್ಲ. ಅಡ್ಡಾದಿಡ್ಡಿ ಬಸ್‌ಗಳ ಸಂಚಾರವಾಗುತ್ತಿದೆ.