ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬಗ್ಗೆ ಮಾತನಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸಂಸದ ಡಾ.ಕೆ. ಸುಧಾಕರ್ ಅವರಿಗೆ ಎಚ್ಚರಿಕೆ ನೀಡಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಶೀಘ್ರ ದೆಹಲಿಗೆ ತೆರಳಿ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣದ ನಾಯಕರು ತೀರ್ಮಾನಿಸಿದ್ದಾರೆ.
ಎಲ್ಲಾ ಹಿರಿಯ ಮುಖಂಡರಿಗೂ ತಿಳಿಸಿ, ಅಧ್ಯಕ್ಷರ ಘೋಷಣೆ ಮಾಡಬೇಕಿತ್ತು, ಆದರೆ ರಾಜ್ಯಾಧ್ಯಕ್ಷ ವಿಜಯೇಂದ್ರ ತಮ್ಮ ಬೆಂಬಲಿಗಾರದ ತಮ್ಮೇಶ್ ಗೌಡರ ಅಣತಿಯಂತೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಏಕಾಪಕ್ಷೀಯವಾಗಿ ಘೋಷಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು