ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಎಸ್ಪಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್ ಖಾನ್ ಪಠಾಣ್ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.