ಮಹಾಕಾವ್ಯಗಳು ಭಾರತೀಯ ಸಂಸ್ಕೃತಿಯ ಬುನಾದಿ:ಡಾ.ಎಂ.ನಂಜುಂಡಸ್ವಾಮಿ
Jan 31 2024, 02:18 AM ISTಬಾಗಲಕೋಟೆ: ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳು ಭಾರತ ಸಂಸ್ಕೃತಿಯ ಬುನಾದಿಯಾಗಿವೆ ಎಂದು ಮಹಾವಿದ್ಯಾಲಯದ ಕನ್ನಡ ಸಂಘದ ಕಾರ್ಯಧ್ಯಕ್ಷ ಡಾ.ಎಂ.ನಂಜುಂಡಸ್ವಾಮಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ರಾಮಾಯಣ, ಮಹಾಭಾರತ ಹಾಗೂ ವಚನ ಕಮ್ಮಟ ಪರೀಕ್ಷೆಗಳ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.