ಗೋಪಿನಾಥ್ ಅಮಾನತು, ಭ್ರಷ್ಟಾಚಾರ ತನಿಖೆಗೆ ಆದೇಶ ಸ್ವಾಗತಾರ್ಹ: ಆರ್.ಶಿವಣ್ಣ

Feb 18 2024, 01:33 AM IST
ಭ್ರಷ್ಟಾಚಾರದಲ್ಲಿ ತೊಡಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಅವರನ್ನು ಸರ್ಕಾರ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿರುವುದು ಸ್ವಾಗತಾರ್ಹ. ಗೋಪಿನಾಥ್ ಅವರು ಇಲಾಖೆಯ ಆಹಾರ ಮತ್ತು ಇತರೆ ಸಾಮಗ್ರಿಗಳ ಪೂರೈಕೆ ಟೆಂಡರ್‌ನಲ್ಲಿ ಕೋಟ್ಯಂತರ ರು.ಗಳ ಭ್ರಷ್ಟಾಚಾರ ಎಸಗಿದ್ದು, ಅದನ್ನು ಬಯಲಿಗೆಳೆದಿದ್ದೆ. ಈ ಬಗ್ಗೆ ಸರ್ಕಾರಕ್ಕೆ ಮತ್ತು ಸಮಾಜ ಕಲ್ಯಾಣ ಸಚಿವರಿಗೆ ಆಧಾರ ಸಮೇತ ದೂರು ನೀಡಿದ್ದೆ. ಇದನ್ನು ಗಮನಿಸಿದ ಸಚಿವರು ಗೋಪಿನಾಥ್ ಅವರನ್ನು ಅಮಾನತುಪಡಿಸಿ, ತನಿಖೆಗೆ ಆದೇಶ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಶಿವಣ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.