ಭ್ರಷ್ಟಾಚಾರ ದೊಡ್ಡ ಪಿಡುಗಾಗಿದ್ದು, ಅದರ ನಿರ್ಮೂಲನೆಯಾದರೆ ದೇಶ ಪ್ರಪಂಚದಲ್ಲೇ ನಂ. 1 ಆಗುತ್ತದೆ. ನನ್ನ ಅಧಿಕಾರವಧಿಯಲ್ಲಿ ಒಳ್ಳೆಯವರಿಗೆ ಯಾವಾಗಲೂ ನನ್ನ ರಕ್ಷಣೆ ಇರುತ್ತೆ.
ಕೇಜ್ರಿವಾಲ್ ಸುಳ್ಳು ಭರವಸೆಗೆ ಬೇಸತ್ತು ಮತದಾರರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ 27 ವರ್ಷದ ನಂತರ ಬಿಜೆಪಿ ಪಕ್ಷಕ್ಕೆ ಆಡಳಿತದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಿದ್ದಾರೆ.