• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಬಾಗಿಲಿಗೆ ಸರ್ಕಾರಿ ಸೇವೆ: ಪಿ.ರವಿಕುಮಾರ್‌

Feb 01 2025, 12:01 AM IST
ಈ ದಿನದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆರೋಗ್ಯ ಇಲಾಖೆ ವತಿಯಿಂದ ಬಾಣಂತಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ನಡೆಸಲಾಯಿತು. ಸ್ಥಳದಲ್ಲಿ 10 ಅರ್ಜಿಗಳಿಗೆ ಪರಿಹಾರ ಸೂಚಿಸಲಾಯಿತು. ಉಳಿದಂತೆ ಕಂದಾಯ ಇಲಾಖೆ- 43,ಗ್ರಾಮ ಪಂಚಾಯಿತಿ- 30, ಆಹಾರ ಇಲಾಖೆ- 5, ವಿದ್ಯುತ್ ಇಲಾಖೆ- 06, ಅರಣ್ಯ ಇಲಾಖೆ- 05, ಇತರೆ ಇಲಾಖೆಗಳಿಂದ- 15, ಪೌತಿಖಾತೆ ಅರ್ಜಿಗಳು- 16 ಸೇರಿ 120 ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು.

ಅಮೆರಿಕ ಅಧ್ಯಕ್ಷರ ಮನೆ ಸಮೀಪವೇ ದುರಂತ - ಲ್ಯಾಂಡಿಂಗ್‌ ಆಗುವಾಗ ಕಾಪ್ಟರ್‌ಗೆ ವಿಮಾನ ಡಿಕ್ಕಿ: 67 ಜನರ ಸಾವು ಶಂಕೆ

Jan 31 2025, 01:31 AM IST
ರನ್‌ವೇನಲ್ಲಿ ಇಳಿಯಲು ಆಗಮಿಸುತ್ತಿದ್ದ ವಿಮಾನವೊಂದಕ್ಕೆ ಸೇನಾ ಹೆಲಿಕಾಪ್ಟರ್‌ ಆಗಸದಲ್ಲೇ ಡಿಕ್ಕಿ ಹೊಡೆದ ಭೀಕರ ಘಟನೆಯೊಂದು ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನ ಹೊರವಲಯದ ವಿಮಾನ ನಿಲ್ದಾಣವೊಂದರಲ್ಲಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಎಲ್ಲಾ 67 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಂದ ಮನೆ ಮುಟ್ಟುಗೋಲು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

Jan 30 2025, 12:32 AM IST
ರಾಮನಗರ ಜಿಲ್ಲೆ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್‌ನಿಂದ 6 ಲಕ್ಷ ರು. ಸಾಲ ಪಡೆದಿದ್ದ ಪ್ರೇಮಾ, ಪೂರ್ತಿ ಹಣವನ್ನು ಪಾವತಿಸಿದ್ದರೂ ಬಾಕಿ 3 ಕಂತುಗಳ ಹಣವನ್ನು ಪಾವತಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಬಾಕಿ ಕಂತುಗಳನ್ನು ಕಟ್ಟದ ಹಿನ್ನೆಲೆಯಲ್ಲಿ ಸಂಸ್ಥೆಯವರು ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.

ಮನೆ ನಿರ್ಮಿಸಿಕೊಳ್ಳಲು ₹10 ಲಕ್ಷ ನೆರವು ನೀಡಿ

Jan 29 2025, 01:35 AM IST
ದೇವದಾಸಿ ಮಹಿಳೆಯರ ಮಕ್ಕಳಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ಸರ್ಕಾರ ₹10 ಲಕ್ಷ ನೀಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಕಲ್ಲಿನಾಥ ಶ್ರೀಗಳ ಬೈಕ್‌ ಕಳ್ಳತನ

Jan 27 2025, 12:45 AM IST
ವಿಜಯಪುರ: ಮನೆಮುಂದೆ ನಿಲ್ಲಿಸಿದ್ದ ಸ್ವಾಮೀಜಿಯೊಬ್ಬರ ಬೈಕ್‌ನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರದಲ್ಲಿ ನಡೆದಿದೆ. ಕೊಲ್ಹಾರದಲ್ಲಿರುವ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿಗೆ ಸೇರಿದ ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನ ಮಾಡಲಾಗಿದೆ. ಜನೇವರಿ 24ರಂದು ತಡರಾತ್ರಿ ರಾಯಲ್ ಎನ್‌ಪೀಲ್ಡ್ ಬೈಕ್ ಅನ್ನು ಕಳ್ಳರು ಕದ್ದೋಯ್ದಿದ್ದಾರೆ. ರಾತ್ರಿ ವೇಳೆ ನಿಲ್ಲಿಸಿದ್ದ ಬೈಕ್ ಗೆ ಹ್ಯಾಂಡಲ್ ಲಾಕ್ ಹಾಕದೆ ಇರುವುದನ್ನು ಗಮನಿಸಿ ಕಳ್ಳತನ ಮಾಡಲಾಗಿದೆ.

ಪ್ರೀತಿಸಿ ಮದುವೆಯಾದ ಪತ್ನಿ ವಿವಾಹ ವಿಚ್ಛೇದನಕ್ಕೆ ಹಠ ಹಿಡಿದ ಕಾರಣಕ್ಕೆ ಮನೆ ಮುಂದೆ ಆತ್ಮಹತ್ಯೆ

Jan 24 2025, 12:47 AM IST
ಪ್ರೀತಿಸಿ ಮದುವೆಯಾದ ಪತ್ನಿ ವಿವಾಹ ವಿಚ್ಛೇದನಕ್ಕೆ ಹಠ ಹಿಡಿದ ಕಾರಣಕ್ಕೆ ಬೇಸರಗೊಂಡು ಮಡದಿ ಮನೆ ಎದುರಿನಲ್ಲೇ ಬೆಂಕಿ ಹಚ್ಚಿಕೊಂಡು ಕ್ಯಾಬ್‌ ಚಾಲನಕೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಹಗಲು ಹೊತ್ತಿನಲ್ಲೇ ಮನೆ ಬೀಗ ತೆಗೆದು ಕದಿಯುತ್ತಿದ್ದ ಮನೆಗಳ್ಳ ಸೆರೆ: ಚಿನ್ನಾಭರಣ ಜಪ್ತಿ

Jan 16 2025, 01:30 AM IST
ಹಗಲು ಹೊತ್ತಿನಲ್ಲೇ ಮನೆಗಳಿಗೆ ಹಾಕಿದ್ದ ಬೀಗ ತೆಗೆದು ಚಿನ್ನಾಭರಣ ದೋಚುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 18.23 ಲಕ್ಷ ರು. ಮೌಲ್ಯದ 261 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.

ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಶೀಘ್ರ ಮನೆ ವಿತರಣೆ

Jan 16 2025, 12:46 AM IST
ಹೌಸಿಂಗ್ ಫಾರ್‌ ಆಲ್ ಯೋಜನೆಯಡಿ ನಿರ್ಮಿಸಿರುವ ಮನೆಗಳ ಪೈಕಿ, ಮುಂದಿನ ಮೂರು ತಿಂಗಳ ಒಳಗೆ ಮೊದಲ ಹಂತದಲ್ಲಿ 8೦೦ ಫಲಾನುಭವಿಗಳಿಗೆ ನೂತನ ಗೃಹಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ವಸತಿ ರಹಿತರು, ನಿರ್ಗತಿಕರು ಹಾಗೂ ಬಡವರಿಗೆ ನೀಡಲು ರಾಜ್ಯ-ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಸುಬ್ರಹ್ಮಣ್ಯ ಬೆಟ್ಟದ ತಪ್ಪಲಿನಲ್ಲಿ ಸುಮಾರು 1181 ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.

ಬೀದಿ ನಾಯಿಗಳ ದಾಳಿಗೆ ಮನೆ ಮುಂದೆ ಕಟ್ಟಿಹಾಕಿದ್ದ ಮೇಕೆ ಬಲಿ..!

Jan 16 2025, 12:45 AM IST
ಗ್ರಾಮದ ರೈತ ತಮ್ಮಣ್ಣಗೌಡ ಜೀವನ ನಿರ್ವಹಣೆಗಾಗಿ ಮೇಕೆಗಳನ್ನು ಸಾಕುತ್ತಿದ್ದರು‌. ಮನೆ ಮುಂದೆ ಮೇಕೆಗಳನ್ನು ಕಟ್ಟಿ ಹಾಕಿದ್ದಾಗ ಬೀದಿ ನಾಯಿಗಳು ಸ್ಥಳದಲ್ಲಿಯೇ ಮೇಕೆಯೊಂದನ್ನು ಕೊಂದು ಹಾಕಿವೆ. ಇನ್ನೊಂದು ಮೇಕೆಯನ್ನು ತೀವ್ರವಾಗಿ ಗಾಯಗೊಳಿಸಿವೆ. ಸ್ಥಳಕ್ಕೆ ಚೊಟ್ಟನಹಳ್ಳಿ ಪಶುವೈದ್ಯಾಧಿಕಾರಿ ಡಾ.ರವಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದರು.

ಶಾಸಕರ ಮನೆ ಗೋಡೆಗೆ ಸಗಣಿ ಬಳಿದ ಬಿಜೆಪಿ ಪ್ರತಿಭಟನೆ

Jan 15 2025, 12:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದರೂ ವಿರೋಧಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಅವರ ಮನೆಯ ಎದುರು ಸಗಣಿ ಹಾಕಿ, ಗೋಡೆಗೆ ಸಗಣಿ ಬಳಿದು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ಅಮಾನವಿಯವಾಗಿ ವರ್ತಿಸಿರುವ ಘಟನೆಯ ಹಿಂದೆ ಷಡ್ಯಂತ್ರ ನಡೆದಿದೆ. ಕೇವಲ ಬಾಹ್ಯ ಆರೋಪಿಯನ್ನು ಕಾಟಾಚಾರಕ್ಕೆ ಬಂದಿಸದೆ ದುಷ್ಕೃತ್ಯದ ಹಿಂದೆ ಇರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ತಾಲೂಕು ರೈತ ಮೋರ್ಚಾ ಘಟಕದ ಸದಸ್ಯರು ಆಗ್ರಹಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved