ಕ್ಷಯ ರೋಗದ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ ಕಾರ್ಯ ನಡೆಸಲಿದ್ದಾರೆ. ಜನರಿಂದ ಕಫ ಪಡೆದು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕೆಲಸ ಮಾಡಲಿದ್ದಾರೆ.