ಅಯೋಧ್ಯೆ ಮಂದಿರ ಉದ್ಘಾಟನೆ: ಮಾಂಸ ಮಾರಾಟ ನಿಷೇಧ

Jan 22 2024, 02:17 AM IST
ಚಾಮರಾಜನಗರಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಿಶೇಷ ಸಭೆ ನಡೆಸಿ ಗ್ರಾಪಂ ಸದಸ್ಯರು ಮಾಂಸ ಮಾರಾಟ ನಿಷೇಧಿಸುವಂತೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಿರ್ಧರಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಜನವರಿ 20 ರಿಂದ 22 ರವರೆಗೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಮಾಂಸದ ಅಂಗಡಿಗಳು ಮತ್ತು ಹೋಟೆಲ್ ಗಳಲ್ಲಿ ಮಾರಾಟ ನಿಷೇಧ ಮಾಡಿ ಗ್ರಾಪಂ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೂರು ದಿನಗಳವರೆಗೆ ಮಾರಾಟ ಸ್ಥಗಿತಗೊಳಿಸಬೇಕು. ಮಾಂಸಾಹಾರ ಹೋಟೆಲ್ ಸೇರಿದಂತೆ ಮಾಂಸ ಮಾರಾಟ ಹೋಟೆಲ್ ಗಳಿಗೂ ನೋಟೀಸ್ ನೀಡಲಾಗಿದೆ. ಈ ನಡುವೆ ಮಾಂಸ ಮಾರಾಟ ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.