ಅನಧಿಕೃತ ಮದ್ಯ ಮಾರಾಟ ಸ್ಥಗಿತಗೊಳಿಸಲು ಮನವಿ
Jan 30 2024, 02:05 AM ISTಮುಧೋಳ: ತಾಲೂಕಿನಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಹೆಚ್ಚಾಗಿದ್ದು, ಕೂಡಲೇ ಸಂಪೂರ್ಣ ಸ್ಥಗಿತಗೊಳಿಸಿ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗಾಗುತ್ತಿರುವ ತೊಂದರೆ ತಪ್ಪಿಸಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆಯವರು ಮುಧೋಳ ಅಬಕಾರಿ ಇಲಾಖೆ ನಿರೀಕ್ಷಕರಿಗೆ ಸೋಮವಾರ ಮನವಿ ಸಲ್ಲಿಸಿದರು. ಜಯ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷೆ ಶೋಭಾ ಬಂಡಿವಡ್ಡರ ಮಾತನಾಡಿ, ಗ್ರಾಮಗಳಲ್ಲಿ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಮತ್ತು ಕೆಲವು ಅಂಗಡಿ, ಮನೆ, ಪಾನಶಾಪ್, ಹೊಟೇಲ್ ಧಾಬಾ ಮತ್ತು ತಾಂಡಾಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಮಕ್ಕಳು ಹಾಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವಂತೆ ಒತ್ತಾಯಿಸಿದರು.