ಗಂಗಾಮತ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಿ
Dec 15 2023, 01:30 AM ISTಗಂಗಾಮತ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಹಾವೇರಿಯ ಜಿಲ್ಲೆಯ ಚೌಡದಾನಾಪುರದ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. ನಗರದ ಅಂಬಿಗರ ಚೌಡಯ್ಯ ಸರ್ಕಲ್ಗೆ ಗುರುವಾರ ಭೇಟಿ ನೀಡಿ, ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು. ಗಂಗಾಮತ ಸಮಾಜವು ರಾಜ್ಯದಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿದ್ದರೂ ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಸಮಾಜ ಅಭಿವೃದ್ಧಿಗೆ ಎಸ್ಟಿ ಮೀಸಲಾತಿ ಅನಿವಾರ್ಯವಾಗಿದೆ. ಮೀಸಲಾತಿ ಜಾರಿ ಮಾಡಲು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡು ಬರುತ್ತಿದೆ. ಇದು ಹೀಗೆ ಮುಂದುವರಿದರೆ ಸಮಾಜದಿಂದ ದೆಹಲಿ ಚಲೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದರು.