ಒಳ ಮೀಸಲಾತಿ: ದಲಿತ ಮುಖಂಡರ ತಮಟೆ ಚಳುವಳಿ
Dec 15 2024, 02:01 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ತಮಟೆ ಚಳುವಳಿ ನಡೆಸಿದರು. ಈ ವೇಳೆ ಬಸವೇಶ್ವರ ವೃತ್ತದಿಂದ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಬಳಿಕ, ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.