ಗ್ಯಾಸ್ ಸಿಲಿಂಡರ್ಗೆ ಹಾರ ಹಾಕಿದ ಮುಖ್ಯಮಂತ್ರಿ , ಹೆಗಲ ಮೇಲೆ ಸಿಲಿಂಡರ್ ಹೊತ್ತ ಡಿ.ಕೆ.ಶಿವಕುಮಾರ್, ಪ್ಲೆಕಾರ್ಡ್ ಹಿಡಿದ ರಣದೀಪ್ ಸುರ್ಜೇವಾಲಾ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಮೊಳಗಿದ ಘೋಷಣೆಗಳು..
ದೇಶದಲ್ಲಿ ನಿರುದ್ಯೋಗ ಅತೀ ದೊಡ್ಡ ಸಮಸ್ಯೆಯಾಗಿದ್ದು, ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸದೆ ಇರುವುದರಿಂದ ಅದು ಹೆಚ್ಚಾಗುತ್ತಿದೆ. ಆದರೆ, ರಾಜ್ಯದಲ್ಲಿ ‘ಯುವ ನಿಧಿ’ ಜಾರಿ ಜೊತೆಗೆ ಯುವಕರಿಗೆ ಕೌಶಲ್ಯ ನೀಡುವ ಮೂಲಕ ನಿರುದ್ಯೋಗ ನಿವಾರಣೆಗೆ ಕಾಂಗ್ರೆಸ್ ಪಣ ತೊಟ್ಟಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇಂದ್ರ ಸರ್ಕಾರ ವಕ್ಫ್ ಬಿಲ್ ತರುವ ಮೂಲಕ ಮುಸ್ಲಿಂರ ಹಕ್ಕುಗಳ ಧ್ವಂಸ ಮಾಡಲು ಹೋರಟಿದೆ. ಇದರಿಂದ ದೇಶದಲ್ಲಿ ಅಶಾಂತಿ ಉಂಟಾಗಲಿದೆ ಎಂದ ರಾಯರಡ್ಡಿ
ಇದೇ ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗದಿದ್ದರೆ ನನ್ನ ಬಂದು ಕೇಳಿ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಮುಖ್ಯಮಂತ್ರಿ ಬದಲಾವಣೆಯ ತಮ್ಮ ಹೇಳಿಕೆ ಪುನಾ ಸಮರ್ಥಿಸಿಕೊಂಡಿದ್ದಾರೆ.
ಭಾರತವು ಎದುರಿಸುತ್ತಿರುವುದು ಕೇವಲ ಆರ್ಥಿಕ ಅಥವಾ ಸಾಮಾಜಿಕ ಅಪಾಯವಲ್ಲ, ಸಂವಿಧಾನಿಕ ಅಪಾಯವನ್ನೂ ಎದುರಿಸುತ್ತಿದೆ. ಬಿಜೆಪಿ ಆಡಳಿತವನ್ನು ನಡೆಸದೇ, ನಮ್ಮ ಗಣತಂತ್ರದ ರಚನೆಯನ್ನೇ ವ್ಯವಸ್ಥಿತವಾಗಿ ಧ್ವಂಸಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.