ಕೇಂದ್ರ ಸರ್ಕಾರದಿಂದ ರಾಜ್ಯ ಹಾಗೂ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಪ್ರಧಾನಿಯವರು ಈ ಬಗ್ಗೆ ಸ್ಥಳ ಹಾಗೂ ಸಮಯ ನಿಗದಿಪಡಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋದಿಗೆ ಆಹ್ವಾನ ನೀಡಿದ್ದಾರೆ.
ರಾಮ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ, ರಾಮಾಯಣ ಐತಿಹ್ಯವುಳ್ಳ ಆಂಧ್ರಪ್ರದೇಶದ ಲೇಪಾಕ್ಷಿ ವೀರಭದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.